ಶುಕ್ರವಾರ, ಜನವರಿ 28, 2011

ನವಚೈತನ್ಯ ಗಾನ

ಮೋಡ ಮುಸುಕಿರೇ ಕತ್ತಲು ಕವಿದಿದೆ ಮನಕ್ಕೆ,
ಹುರುಪಿಲ್ಲ ಕಾರ್ಯದಲಿ ಮಂಕು ಕವಿದಿಹ ಜಗಕ್ಕೆ,
ಶ್ರಮಜೀವಿಗೂ ಕೂಡ ಬಂತು ಆಕಳಿಕೆ,
ಜಗವೆಲ್ಲ ಆಗಿಹುದು ಅಗೋಚರದ ವಶಕೆ.

ಈಗೀರಲು ನಡೆಯಿತು ಅಚ್ಚರಿಯ ವಿದ್ಯಮಾನ
ಮೋಡ ಚದುರಿತು ಬಿಟ್ಟು ಬಿಗುಮಾನ.
ಧರೆಗಿಳಿಯಿತು ಹೊಸ ಹುರುಪಿನ ರವಿಕಿರಣ
ಮೈಮನದರಲಿ ಎಂಥದೋ ಸಂಚಲನ.

ನರನಾಡಿಗಳು ಈಗ ಚೈತನ್ಯದ ಉಗಮಸ್ಥಾನ.
ಇನ್ನೂ ನಿಂತೇ ಇಹಿರೇನು?
ಕೇಳಲಿಲ್ಲವೇ ನಿಮಗೆ ನವಚೈತನ್ಯದ ಗಾನ.

1 ಕಾಮೆಂಟ್‌:

ಅನಾಮಧೇಯ ಹೇಳಿದರು...

ಚೆನ್ನಾಗಿದೆ.ಮುಂದುವರಿಸಿ