ಸೋಮವಾರ, ಸೆಪ್ಟೆಂಬರ್ 5, 2022

ಬಣಕಲ್ ನ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ

ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಕೊಟ್ಟಿಗೆಹಾರ:ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದರಲ್ಲಿ ಶಿಕ್ಷಕರ ಪಾತ್ರ ಅಪಾರವಾದದ್ದು ಎಂದು ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ನಿರ್ದೇಶಕರು ಇಮ್ರಾನ್ ಹೇಳಿದರು.
ಬಣಕಲ್ ರಿವರ್ ವ್ಯೂ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತೀಯ ತತ್ವಶಾಸ್ತ್ರಜ್ಞರು ಮತ್ತು ರಾಷ್ಟ್ರದ ಎರಡನೇ ರಾಷ್ಟ್ರಪತಿಯೂ ಆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನದ ಸ್ಮರಣೆಯಲ್ಲಿ ಆಚರಿಸುವ ಶಿಕ್ಷಕರ ದಿನಾಚರಣೆ ಶಿಕ್ಷಕರ ಮಹತ್ವವನ್ನು ಎಲ್ಲೆಡೆ ಸಾರಲು ಪ್ರೇರಣೆಯಾಗಿದೆ. ಪ್ರಜ್ಞಾವಂತ ನಾಗರಿಕರನ್ನು ಸಮಾಜ ನೀಡುವ ಶಿಕ್ಷಕರ ಕೊಡುಗೆಯನ್ನು ಸ್ಮರಿಸುವ ಅಗತ್ಯವಿದೆ ಎಂದರು
 ಶಿಕ್ಷಕರ ದಿನಾಚರಣೆ ಅಂಗವಾಗಿ  ವಿದ್ಯಾರ್ಥಿಗಳಿಂದ  ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳೇ ಶಿಕ್ಷಕರಿಗೆ ಮಕ್ಕಳಿಂದ ವಿವಿಧ ಕ್ರೀಡಾ ಸ್ಪರ್ಧೆ ಗಳನ್ನು ಆಯೋಜಿಸಿದ್ದರು. 
ವಿಜೇತರಾದ ಶಿಕ್ಷಕರಿಗೆ ಮಕ್ಕಳು ಉಡುಗೊರೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ರಾಧಾ ಕಾರ್ಯಪ್ಪ, ಸಹಶಿಕ್ಷಕರು,ವಿದ್ಯಾರ್ಥಿಗಳು ಇದ್ದರು.