ಕೊಟ್ಟಿಗೆಹಾರ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ಈಶ್ವರಿ ಸಿರಿಗಂಧ ೬೧೬ (ಶೇ೯೯) ಅಂಕ ಪಡೆಯುವ ಮೂಲಕ ಮೂಡಿಗೆರೆ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಫಲ್ಗುಣಿ ಗ್ರಾಮದ ಜಯಪ್ರಕಾಶ್ ಮತ್ತು ಸುಪ್ರಿತಾ ದಂಪತಿಗಳ ಪುತ್ರಿ ಈಶ್ವರಿ ಸಿರಿಗಂಧ, ಕನ್ನಡ ೧೨೪, ಇಂಗ್ಲಿಷ್ ೯೯, ಹಿಂದಿ ೯೮, ಗಣಿತ ೯೯, ವಿಜ್ಞಾನ ೯೭, ಸಮಾಜ ವಿಜ್ಞಾನ ವಿಷಯದಲ್ಲಿ ೯೯ ಅಂಕ ಪಡೆದು ಒಟ್ಟು ೬೧೬ ಅಂಕ ಪಡೆಯುವ ಮೂಲಕ ತಾಲ್ಲೂಕಿಗೆ ಟಾಪರ್ ಎನಿಸಿಕೊಂಡಿದ್ದಾರೆ.
ವಿಧ್ಯಾರ್ಥಿನಿ ಈಶ್ವರಿ ಸಿರಿಗಂಧ ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದು ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ವಿಧ್ಯಾರ್ಥಿನಿ ಈಶ್ವರಿ ಸಿರಿಗಂಧ, ಅಂದು ಮಾಡಿದ ಪಾಠವನ್ನು ಅಂದೇ ಓದಿ ಮನನ ಮಾಡಿಕೊಳ್ಳುತ್ತಿದ್ದೆ. ಪರೀಕ್ಷೆ ಸಮೀಪಿಸುತ್ತಿರುವಾಗ ಪುನರಾರ್ವತನೆ ಓದಿಕೊಳ್ಳುತ್ತಿದ್ದೆ. ಕಷ್ಟ ಪಟ್ಟು ಓದುವುದಕ್ಕಿಂದ ಇಷ್ಟ ಪಟ್ಟು ಓದುತ್ತಿದ್ದೆ. ಮನೆಯಲ್ಲಿ ಕೂಡ ಓದಿನ ಬಗ್ಗೆ ಯಾವುದೇ ಒತ್ತಡಗಳಿರಲಿಲ್ಲ. ಪೋಷಕರು, ಶಿಕ್ಷಕರ ಸಹಕಾರದೊಂದಿಗೆ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಮುಂದೆ ಐಎಎಸ್ ಮಾಡುವ ಗುರಿ ಇದೆ. ಎಸ್ಎಸ್ಎಲ್ಸಿಯಲ್ಲಿ ಹೆಚ್ಚಿನ ಅಂಕವನ್ನು ಪಡೆಯಲು ಕಾರಣರಾದ ಪೋಷಕರು ಮತ್ತು ಶಿಕ್ಷಕರಿಗೆ ಧನ್ಯವಾದ ತಿಳಿಸಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ