ಗುರುವಾರ, ಮೇ 25, 2023

ತೋರಣಮಾವು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ತೋರಣಮಾವು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಮೋಟಮ್ಮ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಭೀಮ್ ಆರ್ಮಿ ಅಧ್ಯಕ್ಷರಾದ ಗಿರೀಶ್ ಅವರು ವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮುನ್ನ ತೋರಣಮಾವು ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಯಿತು. 
ಈ ಸಂದರ್ಭದಲ್ಲಿ ತೋರಣಮಾವು ಸಕಿಪ್ರಾ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಲೋಕೇಶ್, ಕೂದುವಳ್ಳಿ ಗ್ರಾ.ಪಂ ಸದಸ್ಯರಾದ ಜ್ಯೋತಿ, ಆಶಾ ಕಾರ್ಯಕರ್ತೆ ನೇತ್ರಾವತಿ, ಹಿರಿಯ ಮುಖಂಡರಾದ ಈರಯ್ಯ, ಲಿಂಗರಾಜು, ಮುಳ್ಳಯ್ಯ, ಉಮೇಶ್, ಶಶಿಕುಮಾರ್, ಲೋಕೇಶ್ ಮುಂತಾದವರು ಇದ್ದರು.